ಇಂದು 17/08/2023 ರಂದು ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಬೇಡಗಂಪನ ಅರ್ಚಕರ ವತಿಯಿಂದ ಹಾಗೂ ಶ್ರೀ ಸಾಲೂರು ಬೃಹನ್ಮಠಾಧ್ಯಕ್ಷರಾದ ಪಟ್ಟದ ಶ್ರೀ ಶ್ರೀ ಶಾಂತಮಲ್ಲಿಕಾರ್ಜುನಸ್ವಾಮಿಗಳರವರ ನೇತೃತ್ವದಲ್ಲಿ 108 ಕುಂಭಗಳ ಉತ್ಸವ ಮತ್ತು ಶ್ರೀ ಸ್ವಾಮಿಗೆ ಅಭಿಷೇಕಗಳೊಂದಿಗೆ ಶ್ರಾವಣ ಮಾಸದ ನಡೆದ ಪೂಜೆಯ ಸಂದರ್ಭ.
ಶ್ರಾವಣ ಮಾಸದ ಪ್ರಯುಕ್ತ ಮಹದೇಶ್ವರಬೆಟ್ಟದ ಸಾಲೂರು ಮಠದ ಶಾಂತ ಮಲ್ಲಿಕಾರ್ಜುನಸ್ವಾಮೀಜಿ ನೇತೃತ್ವದಲ್ಲಿ ಮಹದೇಶ್ವರಸ್ವಾಮಿಗೆ 108 ಕುಂಬಾಭಿಷೇಕವನ್ನು ಭಕ್ತರು ಈ ದಿನ ಗುರುವಾರದಂದು ಶ್ರದ್ಧಾಭಕ್ತಿಯಿಂದ ನೆರೆವೇರಿಸಿದರು.
ದೇವಾಲಯದಲ್ಲಿ ಮೊದಲಪೂಜೆ ಆರಂಭವಾಗಿದ್ದು, ಇದರ ಜೊತೆಗೆ ದೇವಾಲಯದ ರಾಜಗೋಪುರದ ಮುಂದೆ ಮಜ್ಜನ ಬಾವಿಗೆ ತೆರಳಿ ಗಂಗೆ ಪೂಜೆ ಸೇರಿ ವಿಶೇಷ ಪೂಜೆ ಕೈಗೊಂಡರು. ಬಳಿಕ ವಾದ್ಯಮೇಳ, ಛತ್ರಿ, ಚಾಮರಗಳೊಂದಿಗೆ 108 ಅರ್ಚಕರು ಕುಂಬ ಹೊತ್ತು ದೇವಾಲಯದ ಹೊರ ಹಾಗೂ ಒಳ ಆವರಣದಲ್ಲಿ ಮೆರವಣಿಗೆ ಮಾಡಿ ಗರ್ಭಗುಡಿ ಸುತ್ತ ಪ್ರದಕ್ಷಿಣೆ ಹಾಕಿದರು.
ಪೂಜೆ ನಡೆದ ನಂತರ ಕುಂಬಾಭಿಷೇಕ ನೆರವೇರಿಸಿದರು. ಗುರುವಾರದಿಂದ ಪ್ರತಿದಿನ ದೇವರಿಗೆ 12 ಕುಂಬಾಭಿಷೇಕ, ಲಕ್ಷಬಿಲ್ವಾರ್ಚನೆ ಪೂಜೆ ಸಲ್ಲಿಕೆಯಾಗಲಿದೆ. ಶ್ರಾವಣ ಮಾಸದ ಕೊನೆಯ ದಿನ ಮತ್ತೆ 108 ಕುಂಬಾಭಿಷೇಕ ಜರುಗಲಿದೆ.
ದೇವಾಲಯದಲ್ಲಿ ತ್ರಿಕಾಲ ಪೂಜೆ ಪ್ರಾರಂಭವಾಗಿದ್ದು, ಬೆಳಿಗ್ಗೆ 4ರಿಂದ ಬೆಳಿಗ್ಗೆ 6ರವರೆಗೆ ಮೊದಲ ಪೂಜೆ, ಅಭಿಷೇಕ, ಬಿಲ್ವಾರ್ಚನೆ, ಆರತಿ, 10.30ಕ್ಕೆ ಎರಡನೇ ಪೂಜೆ, ಸಂಜೆ 6.30ರಿಂದ ರಾತ್ರಿ 8.30ರವರೆಗೆ ಮೂರನೇ ಪೂಜೆ ಜರುಗಿದವು. ಅಲ್ಲದೆ ರಾತ್ರಿ 7ಕ್ಕೆ ಚಿನ್ನದ ತೇರಿನ ಉತ್ಸವ ವಿಭೃಂಜಣೆಯಿಂದ ಜರುಗಿತು. ಮೆರವಣಿಗೆಯಲ್ಲಿ ಆನೆ(ಉಮಾಮಹೇಶ್ವರಿ), ನಂದಿಕಂಬ, ವೀರಗಾಸೆ ಕುಣಿತ ವಿವಿಧ ಕಲಾ ತಂಡಗಳು ಭಾಗವಹಿಸಿದ್ದವು. ನೆರೆದಿದ್ದ ಭಕ್ತರು ಉಘೇ ಮಾದಪ್ಪ, ಉಘೇ ಮಾಯ್ಕಾರ ಎಂಬ ಜಯಘೋಷ ಹಾಕಿದರು.
ಮಹದೇಶ್ವರಬೆಟ್ಟ ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿದ್ದು ಬಂದೋಬಸ್ತ್ ಕಲ್ಪಿಸಿದರು. ಮಹದೇಶ್ವರಬೆಟ್ಟದ ಸಾಲೂರು ಮಠದ ಶಾಂತಮಲ್ಲಿಕಾರ್ಜುನಸ್ವಾಮೀಜಿ, ಬೆಡಗಂಪಣ ವೃಂದದವರ, ಭಕ್ತಾದಿಗಳು ಇದ್ದರು.
Негізгі бет ಇಂದು ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ108 ಕುಂಭಗಳ ಉತ್ಸವ ಮತ್ತು ಶ್ರೀ ಸ್ವಾಮಿಗೆ ಅಭಿಷೇಕಗಳೊಂದಿಗೆ ಶ್ರಾವಣ ಮಾಸದಪೂಜೆ
Пікірлер